ಶ್ರೀಮತಿ ಕೆ. ಲಕ್ಷ್ಮೀಪ್ರಿಯಾ ಭಾ.ಆ.ಸೇ ಮಾನ್ಯ ಜಿಲ್ಲಾಧಿಕಾರಿಗಳು ಉತ್ತರಕನ್ನಡ ಕಾರವಾರ ರವರು ಶಿರಸಿ ತಾಲ್ಲೂಕಿಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳ ಪರಿಶೀಲನೆಯಲ್ಲಿ ಭಾಗವಹಿಸಲಾಯಿತು.
1)ಉಪವಿಭಾಗಾಧಿಕಾರಿಗಳ ಕಾರ್ಯಾಲಯ ಶಿರಸಿ ಗೆ ಭೇಟಿ ನೀಡಿ ಪರಿಶೀಲಿಸಿದರು.
2)ಸಿಸಿಎಫ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಲಾಯಿತು.
3)ಇಸಳೂರು ಗ್ರಾಮದಲ್ಲಿರುವ ವಿಜ್ಞಾನ ಕೇಂದ್ರಕ್ಕೆ ಮಂಜೂರಾದ ಜಮೀನನ್ನು ಪರಿಶೀಲನೆ ನಡೆಸಲಾಯಿತು.
4)ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಸಳೂರು ಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮಕ್ಕಳ ಕುಂದು ಕೊರತೆಗಳನ್ನು ವಿಚಾರಿಸಿದರು.
5)ಶಿರಸಿ ನಗರದಲ್ಲಿರುವ ಜಿಲ್ಲಾ ಗ್ರಂಥಾಲಯಕ್ಕೆ ಭೇಟಿ ನೀಡಿ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿ, ಸಾರ್ವಜನಿಕರ ಕುಂದು ಕೊರತೆಗಳನ್ನು ವಿಚಾರಣೆ ನಡೆಸಿದರು.
6)ಶಿರಸಿ ನಗರದಲ್ಲಿರುವ ಸಖಿ ಮತ್ತು ಸಾಂತ್ವಾನ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
7)ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ 766-ಇ ನೇದರ ನಿಲೇಕಣಿ ರಸ್ತೆಯನ್ನು ಪರಿಶೀಲನೆ ನಡೆಸಲಾಯಿತು.
8)ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಶಿರಸಿ-ಕುಮಟಾ ರಾಷ್ಟ್ರೀಯ ಹೆದ್ದಾರಿ 766-ಇ ರಸ್ತೆ ಹಾಗೂ ಸೇತುವೆ ಕಾಮಗಾರಿ ವೇಳೆ ಬೆಣ್ಣೆ ಹೊಳೆಗೆ ಸೇತುವೆ ನಿರ್ಮಾಣ ಹಂತದ ಪ್ರದೇಶದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿರುವ ಕಚ್ಚಾ ರಸ್ತೆಯು ನೀರಿನ ಹರಿವಿನಿಂದ ಹಾನಿಯಾದ ಬಗ್ಗೆ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಕುಮಾರಿ ಕಾವ್ಯರಾಣಿ ಕೆ.ವಿ, ಉಪ ವಿಭಾಗಾಧಿಕಾರಿಗಳು ಹಾಗೂ ಉಪ ವಿಭಾಗದ ದಂಡಾಧಿಕಾರಿಗಳು ಶಿರಸಿ, ಶ್ರೀ ಶಂಕರ ಗೌಡಿ ತಹಶೀಲ್ದಾರ ಶಿರಸಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.