(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್)ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ವಿವಾದ: 'ಯಾವುದೇ ತಾರತಮ್ಯ ಮಾಡಿಲ್ಲ'; ಸಿದ್ದರಾಮಯ್ಯ ಸ್ಪಷ್ಟನೆ.

(ಪಶ್ಚಿಮಘಟ್ಟ ವಾಯ್ಸ್ ಡೈಲಿ ನ್ಯೂಸ್) 

ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಸಮುದಾಯ ಭವನಗಳು ಹಾಗೂ ವಿದ್ಯಾರ್ಥಿ ನಿಲಯಗಳ ಪೈಕಿ ಹೆಚ್ಚಿನವು ಕುರುಬ ಸಮುದಾಯಕ್ಕೆ ಸೇರಿರುವ ಸಂಘ-ಸಂಸ್ಥೆಗಳಿಗೆ ಸಿಕ್ಕಿವೆ ಎಂಬ ವಿವಾದ ಕೇಳಿಬಂದಿದ್ದು, ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಪಷ್ಟನೆ ನೀಡಿದ್ದಾರೆ. ಯಾವುದೇ ಸಮುದಾಯದ ವಿರುದ್ಧ ಉದ್ದೇಶಪೂರ್ವಕ ತಾರತಮ್ಯ ಮಾಡಿಲ್ಲ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ವಿವಿಧ ಹಿಂದುಳಿದ ವರ್ಗಗಳ ಸಂಘಟನೆಗಳು ಮತ್ತು ಸಂಘಗಳ ಮನವಿಗಳನ್ನು ಪರಿಶೀಲಿಸಿ, ಸುಮಾರು 155 ಸಂಘ-ಸಂಸ್ಥೆಗಳಿಗೆ ಸಮುದಾಯ ಭವನ ಹಾಗೂ ವಿದ್ಯಾರ್ಥಿ ನಿಲಯ ನಿರ್ಮಾಣಕ್ಕಾಗಿ 71.85 ಕೋಟಿ ರೂ.ವೆಚ್ಚದ ಪ್ರಾಥಮಿಕ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿವಿಧ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳು ನೀಡಿರುವ ಮನವಿಗಳನ್ನು ಪರಿಶೀಲಿಸಿ ಸುಮಾರು 155 ಹಿಂದುಳಿದ ವರ್ಗಗಳ ಸಂಘ - ಸಂಸ್ಥೆಗಳಿಗೆ ರೂ.71.85 ಕೋಟಿ ವೆಚ್ಚದಲ್ಲಿ ಸಮುದಾಯ ಭವನ ಮತ್ತು ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ ಪೂರ್ವಭಾವಿ ಮಂಜೂರಾತಿ ನೀಡಿದೆ.
ಇದೇನು ಫಲಾನುಭವಿಗಳ ಅಂತಿಮ ಪಟ್ಟಿ ಅಲ್ಲ. ಬೇರೆ ಬೇರೆ ಹಿಂದುಳಿದ ಜಾತಿಗಳು ನೀಡಿರುವ ಮನವಿಗಳನ್ನು ಕೂಡಾ ಪರಿಶೀಲಿಸಿ, ಅವುಗಳಿಗೆ ಮುಂದಿನ ದಿನಗಳಲ್ಲಿ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಇಲಾಖೆಗೆ ಸಲ್ಲಿಸಲಾಗಿರುವ ಮನವಿಗಳಲ್ಲಿ ಕುರುಬ ಸಮುದಾಯಕ್ಕೆ ಸೇರಿರುವ ಮನವಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣಕ್ಕೆ ಆ ಸಮುದಾಯಕ್ಕೆ ಹೆಚ್ಚಿನ ಅನುದಾನ ಸಂದಾಯವಾಗಿದೆಯೇ ಹೊರತು ಉದ್ದೇಶಪೂರ್ವಕವಾಗಿ ಯಾವುದೇ ಬಗೆಯ ತಾರತಮ್ಯ ಮಾಡಲಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವರದಿ: ಶಂಕರ್ ಎಚ್. ಪಾಟೀಲ್
PGK

Post a Comment

Previous Post Next Post